ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್ಜಿಎಸ್ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ 5,911 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. ಈ ಪೈಕಿ 3,700 ಕೋಟಿ ರೂ. ಕೇಂದ್ರ ಸರ್ಕಾರ, 2,211 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಲಿವೆ.
ಪರಿಷ್ಕೃತ ಯೋಜನೆಯ ಅನ್ವಯ ಏ.1 ರಿಂದ 2026 ರ ಮಾ.31 ರ ವರೆಗೆ ದೇಶದ 2.78 ಲಕ್ಷ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿರುವ 60 ಲಕ್ಷ ಚುನಾಯಿತ ಪ್ರತಿನಿಧಿಗಳು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದರಿಂದ ನೆರವಾಗಲಿದೆ.
ಅಭಿವೃದ್ಧಿ ಗುರಿಯನ್ನೇ ಪ್ರಮುಖವಾಗಿ ಇರಿಸಿಕೊಳ್ಳಲಾಗಿರುವ ಬಡತನ ಮುಕ್ತ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಜೀವನ ಕ್ರಮ, ಆರೋಗ್ಯಯುಕ್ತ ಗ್ರಾಮ, ಮಕ್ಕಳ ಸ್ನೇಹಿ ವಾತಾವರಣ ಇರುವ, ಉತ್ತಮ ರೀತಿಯಲ್ಲಿ ನೀರು ಪೂರೈಕೆ, ನೈರ್ಮಲೀಕರಣ ಮತ್ತು ಹಸಿರುಯುಕ್ತ, ಮೂಲಸೌಕರ್ಯಗಳಲ್ಲಿ ಸ್ವಾವಲಂಬನೆ, ಸಾಮಾಜಿಕವಾಗಿ ಕೂಡ ಭದ್ರತೆ ಹೊಂದಿರುವ, ಉತ್ತಮ ಆಡಳಿತ ವ್ಯವಸ್ಥೆ ಹೊಂದಿರುವ ಮತ್ತು ಅಳಿವಿನ ಅಂಚಿನಲ್ಲಿರುವ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಾಪಾಡಿಕೊಳ್ಳುವ ಅಂಶಗಳನ್ನು ಆರ್ಜಿಎಸ್ಎ ಒಳಗೊಂಡಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಇರುವ ಹಲವು ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…