ಗ್ರಾಮೀಣ ಜನವಸತಿ ಮಿಷನ್ ಗೋದಾಮು ಕಟ್ಟಡ ಉದ್ಘಾಟನೆ

September 1, 2025
6:24 AM

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ .ಕೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಗ್ರಾಮಪಂಚಾಯಿತಿ ಕಾರ್ಯಾಲಯದ ಕಟ್ಟಡ ಮತ್ತು ರಾಷ್ಟ್ರೀಯ ಗ್ರಾಮೀಣ ಜನವಸತಿ ಮಿಷನ್ ಗೋದಾಮು ಕಟ್ಟಡವನ್ನು ಭಾರಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಜನರು ಯಾವುದೇ ಕಾರಣಕ್ಕೂ ಭೂಮಿಯನ್ನು ಮಾರಾಟ ಮಾಡಿಕೊಳ್ಳಲು ಮುಂದಾಗಬಾರದು. ಇರುವ ಜಮೀನನ್ನು ಉಳಿಸಿಕೊಳ್ಳುವ ಕಡೆಗೆ ಒತ್ತು ನೀಡಬೇಕು. ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮಪಂಚಾಯಿತಿಯನ್ನು ಅತ್ಯುತ್ತಮವಾಗಿ ನಿರ್ಮಿಸಿದ್ದು, ಈ ಮೂಲಕ ಜನರಿಗೆ ಉತ್ತಮ ಸೇವೆಯನ್ನು ಕಲ್ಪಿಸಬೇಕಾಗಿದೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ ಪದ್ಮಿನಿ ಬಿರಾದಾರ ಮಾತನಾಡಿ, ಗ್ರಾಮ ಪಂಚಾಯಿತಿ ಮೂಲಕ ಜನರಿಗೆ ಅಗತ್ಯವಾಗಿರುವ ರಸ್ತೆ, ವಿದ್ಯುತ್, ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಮಾತನಾಡಿ, ದೇಶದಲ್ಲಿ ಶೇಕಡ 70ರಷ್ಟು ಜನರು ಹಳ್ಳಿಗಳಲ್ಲೇ ಬದುಕು ಕಟ್ಟಿಕೊಂಡಿದ್ದಾರೆ. ಹಳ್ಳಿಗಳು ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿ ಸಾಧ್ಯ. ಹಳ್ಳಿಗಳ ಅಭಿವೃದ್ಧಿ ವಿಷಯದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಹಿರಿದು ಎಂದು ತಿಳಿಸಿದರು.

ಈ ವೇಳೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಹೊಸಮನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪದ್ಮಿನಿ ಬಿರಾದಾರ, ಬಸವಂತರಾಯ ಬಿರಾದಾರ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror