Advertisement
MIRROR FOCUS

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

Share

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉದ್ಘಾಟಿಸಿದರು.

Advertisement
Advertisement

ಈ ಸಂದರ್ಭ ಮಾತನಾಡಿದ ಶಾಲಿನಿ ರಜನೀಶ್,  ನಬಾರ್ಡ್ ವಿಶೇಷ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಿದೆ. ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಹಾಗೂ ಯುವ ಜನತೆ ನಬಾರ್ಡ್ ನ ವಿವಿಧ ಯೋಜನೆಗಳನನ್ನು ಸದುಪಯೋಗಪಡಿಸಿಕೊಂಡು, ಉದ್ಯಮಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

RBIನ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೇನ್ ಗುಪ್ತಾ, ಇಂದಿನ ಸಮಗ್ರ ಹಣಕಾಸು ಸಹಕಾರಿ ಬ್ಯಾಂಕಿಂಗ್ ಸುಧಾರಣೆಗಾಗಿ ನಬಾರ್ಡ್ ಶ್ರಮಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ನಬಾರ್ಡ್ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು, ಗ್ರಾಮೀಣ ಪ್ರದೇಶಗಳ ಆರ್ಥಿಕ ಮಟ್ಟ ಸುಧಾರಣೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳ ಪ್ರಗತಿಗೆ ನಬಾರ್ಡ್ ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ನ   ಕಾರ್ಯನಿರ್ವಾಹಕ ನಿರ್ದೇಶಕ  ಭವೇಂದ್ರ ಕುಮಾರ್, ನಬಾರ್ಡ್ 44 ವರ್ಷದ ಯುವ ಸಂಸ್ಥೆಯಾಗಿದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಲದಿಂದ ನಾನು ನಬಾರ್ಡ್ ಪ್ರಗತಿ ಕಂಡಿದ್ದೇನೆ, ನಬಾರ್ಡ್ ಎಲ್ಲಾ ಬ್ಯಾಂಕರ್ ಗಳ ಜೊತೆ ಸದಾ ಇರಲಿದೆ. ಗ್ರಾಮೀಣ ಕೃಷಿ ಕ್ಷೇತ್ರದ ಸಂಶೋಧನ ತಂಡ ಅನೇಕ ಯೋಜನೆಗಳನ್ನು ಆವಿಷ್ಕರಿಸುವ ಮೂಲಕ ದೇಶದ ಪ್ರಗತಿಗೆ ಕಾರಣವಾಗಿದೆ. 2047ರ ವಿಕಸಿತ ಭಾರತದ ಪ್ರಗತಿಗೆ ನಬಾರ್ಡ್ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಈ ವೇಳೆ  ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಭಂಡಿವಾಡ್, ಉಪ ಪ್ರಧಾನ ವ್ಯವಸ್ಥಾಪಕ  ಶ್ರೀಜಾ ನಾಯರ್  ಸೇರಿದಂತೆ ಬ್ಯಾಂಕಿಂಗ್ ವಲಯದ ಹಿರಿಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸಹಕಾರಿ ಮತ್ತು ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

5 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

5 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

5 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

5 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

6 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

16 hours ago