Advertisement
MIRROR FOCUS

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

Share

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಲಿನಿ ರಜನೀಶ್,  ನಬಾರ್ಡ್ ವಿಶೇಷ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಿದೆ. ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಹಾಗೂ ಯುವ ಜನತೆ ನಬಾರ್ಡ್ ನ ವಿವಿಧ ಯೋಜನೆಗಳನನ್ನು ಸದುಪಯೋಗಪಡಿಸಿಕೊಂಡು, ಉದ್ಯಮಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

RBIನ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೇನ್ ಗುಪ್ತಾ, ಇಂದಿನ ಸಮಗ್ರ ಹಣಕಾಸು ಸಹಕಾರಿ ಬ್ಯಾಂಕಿಂಗ್ ಸುಧಾರಣೆಗಾಗಿ ನಬಾರ್ಡ್ ಶ್ರಮಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ನಬಾರ್ಡ್ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು, ಗ್ರಾಮೀಣ ಪ್ರದೇಶಗಳ ಆರ್ಥಿಕ ಮಟ್ಟ ಸುಧಾರಣೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳ ಪ್ರಗತಿಗೆ ನಬಾರ್ಡ್ ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ನ   ಕಾರ್ಯನಿರ್ವಾಹಕ ನಿರ್ದೇಶಕ  ಭವೇಂದ್ರ ಕುಮಾರ್, ನಬಾರ್ಡ್ 44 ವರ್ಷದ ಯುವ ಸಂಸ್ಥೆಯಾಗಿದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಲದಿಂದ ನಾನು ನಬಾರ್ಡ್ ಪ್ರಗತಿ ಕಂಡಿದ್ದೇನೆ, ನಬಾರ್ಡ್ ಎಲ್ಲಾ ಬ್ಯಾಂಕರ್ ಗಳ ಜೊತೆ ಸದಾ ಇರಲಿದೆ. ಗ್ರಾಮೀಣ ಕೃಷಿ ಕ್ಷೇತ್ರದ ಸಂಶೋಧನ ತಂಡ ಅನೇಕ ಯೋಜನೆಗಳನ್ನು ಆವಿಷ್ಕರಿಸುವ ಮೂಲಕ ದೇಶದ ಪ್ರಗತಿಗೆ ಕಾರಣವಾಗಿದೆ. 2047ರ ವಿಕಸಿತ ಭಾರತದ ಪ್ರಗತಿಗೆ ನಬಾರ್ಡ್ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಈ ವೇಳೆ  ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಭಂಡಿವಾಡ್, ಉಪ ಪ್ರಧಾನ ವ್ಯವಸ್ಥಾಪಕ  ಶ್ರೀಜಾ ನಾಯರ್  ಸೇರಿದಂತೆ ಬ್ಯಾಂಕಿಂಗ್ ವಲಯದ ಹಿರಿಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸಹಕಾರಿ ಮತ್ತು ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

5 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

6 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

15 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

19 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

20 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago