Advertisement
MIRROR FOCUS

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

Share

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಲಿನಿ ರಜನೀಶ್,  ನಬಾರ್ಡ್ ವಿಶೇಷ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಿದೆ. ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಹಾಗೂ ಯುವ ಜನತೆ ನಬಾರ್ಡ್ ನ ವಿವಿಧ ಯೋಜನೆಗಳನನ್ನು ಸದುಪಯೋಗಪಡಿಸಿಕೊಂಡು, ಉದ್ಯಮಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

RBIನ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೇನ್ ಗುಪ್ತಾ, ಇಂದಿನ ಸಮಗ್ರ ಹಣಕಾಸು ಸಹಕಾರಿ ಬ್ಯಾಂಕಿಂಗ್ ಸುಧಾರಣೆಗಾಗಿ ನಬಾರ್ಡ್ ಶ್ರಮಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ನಬಾರ್ಡ್ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು, ಗ್ರಾಮೀಣ ಪ್ರದೇಶಗಳ ಆರ್ಥಿಕ ಮಟ್ಟ ಸುಧಾರಣೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳ ಪ್ರಗತಿಗೆ ನಬಾರ್ಡ್ ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ನ   ಕಾರ್ಯನಿರ್ವಾಹಕ ನಿರ್ದೇಶಕ  ಭವೇಂದ್ರ ಕುಮಾರ್, ನಬಾರ್ಡ್ 44 ವರ್ಷದ ಯುವ ಸಂಸ್ಥೆಯಾಗಿದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಲದಿಂದ ನಾನು ನಬಾರ್ಡ್ ಪ್ರಗತಿ ಕಂಡಿದ್ದೇನೆ, ನಬಾರ್ಡ್ ಎಲ್ಲಾ ಬ್ಯಾಂಕರ್ ಗಳ ಜೊತೆ ಸದಾ ಇರಲಿದೆ. ಗ್ರಾಮೀಣ ಕೃಷಿ ಕ್ಷೇತ್ರದ ಸಂಶೋಧನ ತಂಡ ಅನೇಕ ಯೋಜನೆಗಳನ್ನು ಆವಿಷ್ಕರಿಸುವ ಮೂಲಕ ದೇಶದ ಪ್ರಗತಿಗೆ ಕಾರಣವಾಗಿದೆ. 2047ರ ವಿಕಸಿತ ಭಾರತದ ಪ್ರಗತಿಗೆ ನಬಾರ್ಡ್ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಈ ವೇಳೆ  ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಭಂಡಿವಾಡ್, ಉಪ ಪ್ರಧಾನ ವ್ಯವಸ್ಥಾಪಕ  ಶ್ರೀಜಾ ನಾಯರ್  ಸೇರಿದಂತೆ ಬ್ಯಾಂಕಿಂಗ್ ವಲಯದ ಹಿರಿಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸಹಕಾರಿ ಮತ್ತು ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

12 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

20 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago