Advertisement
The Rural Mirror ಕಾಳಜಿ

ಗ್ರಾಮೀಣಾಭಿವೃದ್ಧಿ ಕಡೆಗೆ ಹೆಜ್ಜೆ | ರೂರಲ್‌ ಮಿರರ್‌ ಕಾಳಜಿ | ನಿಮ್ಮೂರಲ್ಲಿ ಸಮಸ್ಯೆ ಇದೆಯೇ ತಡಮಾಡಬೇಡಿ – ಮಾತಾಡೋಣ |

Share

ದಕ್ಷಿಣ ಕನ್ನಡ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ. ವಿವಿಧ ತಾಲೂಕುಗಳು ವೇಗದಿಂದ ಅಭಿವೃದ್ಧಿಯಾಗುತ್ತದೆ. ರಸ್ತೆ, ನೆಟ್ವರ್ಕ್‌, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕಡೆಗೆ ಹೆಜ್ಜೆ ಇಡುತ್ತಿದೆ. ಅಭಿವೃದ್ಧಿಯ ಕಲ್ಪನೆ ಬಂದಾಗ ಬೌದ್ಧಿಕವಾಗಿ ಹಾಗೂ ಬೌತಿಕವಾಗಿ ಎರಡೂ ಅಭಿವೃದ್ದಿಯಾದರೆ ಮಾತ್ರವೇ  ಊರು ಇನ್ನಷ್ಟು ಸುಂದರವಾಗಲಿದೆ. ರಸ್ತೆ, ನೆಟ್ವರ್ಕ್‌ , ಸೇತುವೆ, ವಿದ್ಯುತ್‌ ಈಗಿನ ಪ್ರಮುಖ ಬೇಡಿಕೆಯ ವಿಷಯವಾಗಿದೆ. ಅನೇಕ ವರ್ಷಗಳಿಂದ ವಿವಿಧ ಕಾರಣಗಳಿಂದ ಈ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಅದಕ್ಕಾಗಿ ಯಾರನ್ನೂ ದೂರಿಯೂ, ಟೀಕೆ ಮಾಡಿಯೂ ಪ್ರಯೋಜನ ಇಲ್ಲ. ನಮ್ಮ ಸಮಸ್ಯೆಗೆ ನಾವೇ ಕಾರಣರು. ನಾವು ಸಂಬಂಧಿತರಲ್ಲಿ ಹೇಳದೇ ಇದ್ದುದು, ಕೇಳದೇ ಇದ್ದುದೇ ಕಾರಣ. ಈಗ ನಾವು ಹೇಳಿಕೊಂಡರೆ ಮಾತ್ರವೇ ಪರಿಹಾರವೂ ಸಾಧ್ಯವಿದೆ. ಈಗಾಗಲೇ ಸಾಕಷ್ಟು ಮಂದಿ ರೂರಲ್‌ ಮಿರರ್‌ ಗೆ ತಮ್ಮೂರಿನ ಮೂಲಭೂತ ಸಮಸ್ಯೆಗಳ ಬಗ್ಗೆ ಫೋಟೊಗಳನ್ನು ಕಳುಹಿಸುತ್ತಿದ್ದಾರೆ, ತಮ್ಮ ಹೆಸರು ಪ್ರಕಟಿಸದಂತೆಯೂ ಮನವಿ ಮಾಡುತ್ತಾರೆ. ಹೀಗಾಗಿ ಎಲ್ಲವನ್ನೂ ಪ್ರಕಟಿಸಲು ಆಗುತ್ತಿಲ್ಲ. ಈಗ ಅಭಿಯಾನದ ರೂಪದಲ್ಲಿ ಇಂತಹ ವರದಿಗಳನ್ನು  ಮಾಡಬಹುದಾಗಿದೆ. ತನ್ನೂರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಪ್ರಶ್ನೆ ಮಾಡುವುದೇ  ಗ್ರಾಮೀಣಾಭಿವೃದ್ಧಿಯ ಮೊದಲ ಹೆಜ್ಜೆ. ಇದಕ್ಕೆ ನಾವು ವೇದಿಕೆಯಾಗುತ್ತೇವೆ ಅಷ್ಟೇ.

ಮಹಾತ್ಮಾಗಾಂಧೀಜಿ ಅವರು ಹೇಳುವ ಕಲ್ಪನೆಯೂ ಅಭಿವೃದ್ಧಿಯ ಕಲ್ಪನೆಯೂ ಇದೇ  ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಕಲ್ಪನೆಗಳೂ ಸುಂದರವಾಗಿದೆ. ಇದಕ್ಕಾಗಿ ನಾವು ಗ್ರಾಮೀಣ ಭಾರತವನ್ನು ಇನ್ನಷ್ಟು ಗಟ್ಟಿ ಮಾಡುವ ಸಲುವಾಗಿ ಪುಟ್ಟದೊಂದು ಹೆಜ್ಜೆ ಇರಿಸೋಣ. ನಿಮ್ಮ ಊರಿನ ಗ್ರಾಮೀಣ ಸಮಸ್ಯೆಗಳು, ಎಷ್ಟೋ ವರ್ಷಗಳಿಂದ ಆಗದೇ ಇರುವ ರಸ್ತೆ, ಸೇತುವೆ, ನೆಟ್ವರ್ಕ್‌ ಸಮಸ್ಯೆಗಳ ಬಗ್ಗೆ ನಮಗೊಂದು ವಿಡಿಯೋ, ಫೋಟೋ ಸಹಿತ ವಿವರ ಕಳುಹಿಸಿಕೊಡಿ. ನಾವು ಬೆಳಕು ನೀಡುತ್ತಾ, ಎಲ್ಲೆಲ್ಲಿ ಏನಾಗಬೇಕಿದೆ ಎಂಬುದರ ಪಟ್ಟಿ ಮಾಡೋಣ, ಅದನ್ನು ಸಂಬಂಧಿತರ ಗಮನಕ್ಕೆ ತರೋಣ. ಹಾಗಿದ್ದರೆ ತಡವೇಕೆ ? ನಮ್ಮ ವಾಟ್ಸಪ್‌ ಸಂಖ್ಯೆಗೆ ಊರು, ಫೋಟೊ, ಪುಟ್ಟ ವಿಡಿಯೋ ಸಹಿತ ವಿವರ ಕನ್ನಡದಲ್ಲಿ ಬರೆದು ಕಳುಹಿಸಿ. ನಮ್ಮ ವಾಟ್ಸಪ್‌ ಸಂಖ್ಯೆ 9449125447 ಅಥವಾ 9880497447 ( ಯಾವುದೇ ಕಾರಣಕ್ಕೂ ಕರೆ ಮಾಡುವ ಅವಶ್ಯಕತೆ ಇಲ್ಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

15 minutes ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

31 minutes ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

10 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

18 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago