Advertisement
Opinion

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

Share

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ ಸಂಗ್ರಹ ಮತ್ತು ಸದಸ್ಯರಿಗೆ ಸಾಲ ವಿತರಣೆ. ಸಹಕಾರ ಸಂಘದ ವ್ಯವಹಾರ ಸದಸ್ಯರೊಳಗೆ ಮಾತ್ರ ಇರಬೇಕು ಎಂಬುದು ತಾತ್ವಿಕ‌ ನಿಯಮ. ಸಂಘದ ಸದಸ್ಯರಾಗಬೇಕಾದರೆ ಸಂಘದ ಶೇರು ಪತ್ರ ಪಡೆಯುವುದೂ ಕಡ್ಡಾಯ. ಪ್ರತಿಯೋರ್ವ ಸದಸ್ಯನೂ ಕನಿಷ್ಟ ಒಂದು ಶೇರು ( ಪಾಲು ಬಂಡವಾಳ ಪತ್ರ) ಹೊಂದಿರಬೇಕಾದ್ದು ಅಪೇಕ್ಷಣೀಯ.
ಪಾಲು ಬಂಡವಾಳ ಎಂಬುದು ಸಂಘದ ಮೂಲಧನ. ಸಂಘ ಗಳಿಸಿದ ಲಾಭದಲ್ಲಿ ಪ್ರತಿಯೋರ್ವ ಸದಸ್ಯನಿಗೂ ಅವರವರು ಹೊಂದಿರುವ ಪಾಲು ಬಂಡವಾಳದ ಮೇಲೆ ನಿಯಮಗಳ ಅನುಸಾರ ಲಾಭಾಂಶ ಕೊಡಬೇಕಾಗ್ತದೆ. ಸಂಘ ನಷ್ಟದಲ್ಲಿ ಇದ್ದರೆ ಅಥವಾ ಕನಿಷ್ಟ ಲಾಭದಲ್ಲಿ ಇದ್ದರೆ ಲಾಭಾಂಶ ಘೋಷಣೆ ಇಲ್ಲ.

ಸಂಘ ನಷ್ಟದಲ್ಲಿ ಇದ್ದಾಗ ಅಥವಾ ಕನಿಷ್ಟ ಲಾಭದಲ್ಲಿ ಇರುವಾಗ ಹೆಚ್ಚು ಪಾಲುಬಂಡವಾಳ ಇದ್ದಷ್ಟೂ ಸಂಘಕ್ಕೆ ಲಾಭ. ಯಾಕೆಂದರೆ ಆ ಹಣಕ್ಕೆ ಪ್ರತಿಫಲ‌ ಕೊಡುವುದು ಕಡ್ಡಾಯವಲ್ಲ. ನಿರಖು ಠೇವಣಿಗಾದರೆ ಕಡ್ಡಾಯವಾಗಿ ಬಡ್ಡಿ ಹಣ ಕೊಡಲೇ ಬೇಕು. ಅದೇ ಸಂಘ ಗರಿಷ್ಟ ಲಾಭ ಗಳಿಸುವ ಸ್ಥಿತಿಯಲ್ಲಿ ಇದ್ದಾಗ ಪಾಲು ಬಂಡವಾಳದ ಪ್ರಮಾಣ ಕಡಿಮೆ ಮಾಡಿ , ನಿರಖು ಠೇವಣಿಯ ಪ್ರಮಾಣ ಹೆಚ್ಚಿರುವಂತೆ ನೋಡಿಕೊಳ್ಳುವುದು ಲಾಭ.

ನಿರಖು ಠೇವಣಿ ಮತ್ತು ಪಾಲು ಬಂಡವಾಳದ ಮೇಲೆ ಸದಸ್ಯರಿಗೆ ಇರುವ ವ್ಯತ್ಯಾಸ ಇದು. ನಿರಖು ಠೇವಣಿಯಲ್ಲಿ ನಿರ್ಧರಿತ ಬಡ್ಡಿದರ ಸಂಘ ಕೊಡಲೇ ಬೇಕು. ಸಂಘದ ಲಾಭಾಲಾಭದ ಪ್ರಶ್ನೆ ಇಲ್ಲ. ಪಾಲುಬಂಡವಾಳದ ಮೇಲೆ ಸಂಘ ಲಾಭದಲ್ಲಿ ಇದ್ದರೆ ಮಾತ್ರ ಲಾಭಾಂಶ ಕೊಟ್ಟರೆ ಸಾಕು.  ನಿರಖು ಠೇವಣಿಯ ಮೇಲೆ ಸಂಘ ಯಾವ ಬಡ್ಡಿದರ ಕೊಡುತ್ತದೆಯೋ ಅದಕ್ಕಿಂತಲೂ ಹೆಚ್ಚು ಲಾಭಾಂಶ ಪಾಲು ಬಂಡವಾಳದ ಮೇಲೆ ಘೋಷಿಸಿದರೆ ಸಂಘ ಸಧೃಢ ಅಂತಲೇ ಪರಿಗಣಿಸುವುದು. ಸದಸ್ಯರಿಗೂ ಅಂತಹ ಸಂದರ್ಭದಲ್ಲಿ ನಿರಖು ಠೇವಣಿ ಇಡುವುದಕ್ಕಿಂತಲೂ ಪಾಲು ಬಂಡವಾಳದ ಮೇಲೆ ಹಣ ಹೂಡುವುದು ಲಾಭದಾಯಕ. ಆದ್ದರಿಂದ ಗರಿಷ್ಟ ಲಾಭಾಂಶ ಘೋಷಣೆ ಸಂಘದ ಆಡಳಿತ ಮಂಡಳಿಯ ಪ್ರತಿಷ್ಟೆಯ ವಿಷಯವಾಗಿ ಬಿಡ್ತದೆ.

ವಾಸ್ತವದಲ್ಲಿ ಸಹಕಾರ ಸಂಘದಲ್ಲಿ ಸದಸ್ಯರು ಒಂದಕ್ಕಿಂತಲೂ ಹೆಚ್ಚು ಪಾಲು ಬಂಡವಾಳ ಪತ್ರ ಹೊಂದುವುದು ಸಾಲ ಪಡೆದುಕೊಂಡಾಗ ಮಾತ್ರ. ಸಂಘದ ಆರಂಭದ ಕಾಲದಲ್ಲಿ ಸಂಘ ದುರ್ಬಲವಾಗಿರುವುದು ಸಹಜ. ಆದ್ದರಿಂದ ಸಂಘ ಸದಸ್ಯರಿಂದ ಕಡ್ಡಾಯವಾಗಿ ಹೆಚ್ಚುವರಿ ಪಾಲು ಬಂಡವಾಳ ಪಡೆದುಕೊಳ್ತದೆ. ಸದಸ್ಯರು ಸಾಲ ಪಡೆದುಕೊಳ್ಳ ಬೇಕಾದರೆ ಸಾಲದ ಮೊತ್ತದ ಮೇಲೆ ಕನಿಷ್ಟ ಪಾಲು ಬಂಡವಾಳ ಇರಲೇ ಬೇಕು ಅಂತ ನಿಯಮ ,ಈ ಕಾರಣಕ್ಕಾಗಿ, ಸಂಘ ಮಾಡುತ್ತದೆ.

ಸಂಘದ ಆಡಳಿತ ಮಂಡಳಿಗೆ ಸ್ವಪ್ರತಿಷ್ಟೆಯೇ ಮುಖ್ಯವಾದಾಗ ಕೃತಕವಾಗಿ ವಾಸ್ತವ ಸಾಮರ್ಥ್ಯಕ್ಕಿಂತಲೂ ಹೆಚ್ಚು ಲಾಭಾಂಶ ಘೋಷಣೆಯ ಪ್ರಯತ್ನಕ್ಕಿಳಿಯುತ್ತದೆ. ಇದಕ್ಕಾಗಿ ಅದು ಸಂಘದ ಪಾಲು ಬಂಡವಾಳದ ಪ್ರಮಾಣವನ್ನು ಇಳಿಸುವ ಯತ್ನ ಮಾಡುತ್ತದೆ. ಇದರಲ್ಲಿ ಅನೇಕಾನೇಕ ವಿಧಾನಗಳು ಇವೆ. ಒಬ್ಬೊಬ್ವರದ್ದು ಒಂದೊಂದು ತಂತ್ರ. ಸಾಲಕ್ಕಾಗಿ ಹೊಂದಿರಬೇಕಾದ ಪಾಲು ಬಂಡವಾಳ ಪತ್ರದ ಪ್ರಮಾಣ ಇಳಿಸುವುದು,ಸದಸ್ಯರು ಹೊಂದುವ ಪಾಲು ಪತ್ರದ ಒಟ್ಟು ಮೊತ್ತದ ಮೇಲೆ ಮಿತಿ ಹೇರುವುದು,ಸದಸ್ಯರು ಹೊಂದಿರುವ ಪಾಲು ಪತ್ರದ ಸಂಪೂರ್ಣ ಮೊತ್ತಕ್ಕೆ ಲಾಭಾಂಶ ಕೊಡದೇ ಇರುವುದು…….., ಹೀಗೇ ಅನೇಕಾನೇಕ ತಂತ್ರಗಳಿವೆ. ಈ ದಾರಿ ಆಡಳಿತ ಮಂಡಳಿ ಹಿಡಿದಾಗ ಲಾಭಾಂಶ ಘೋಷಣೆಯನ್ನು ತೀವ್ರವಾಗಿ ಏರಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ( ಪಕ್ಷದಲ್ಲಿ…?) ಪ್ರತಿಷ್ಟಿತ ಅಂತ ಅನಿಸಿಕೊಳ್ತದೆ.

ಕೆಲವೊಮ್ಮೆ ಸಹಕಾರ ಕ್ಷೇತ್ರದ ನಾಯಕರುಗಳೂ ಈ ತಂತ್ರಕ್ಕೆ ಬಲಿ ಬೀಳ್ತಾರೆ. ಈ ಮಾದರಿ ಕೃತಕವಾಗಿ ಹೆಚ್ಚಿಸಿದ ಲಾಭಾಂಶ ಘೋಷಣೆಯನ್ನು ” ಮಾದರಿ” ಅಂತ ಇತರರಿಗೆ ಬಣ್ಣಿಸುವುದೂ ಉಂಟು. ಈ ತಂತ್ರಗಳ ಅರಿವು ಇಲ್ಲದ ಇತರ ಸಹಕಾರಿಗಳು ತಾವು ಹಿನ್ನಡೆಯಲ್ಲಿದ್ದೇವೇನೋ ಅಂತ ನಿರಾಶರಾಗುವುದೂ ಉಂಟು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago