ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.
ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್ ಹೇಳುತ್ತಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…