ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.
ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್ ಹೇಳುತ್ತಾರೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…