ಗ್ರಾಮೀಣ ಭಾಗದಲ್ಲಿ ಅನೇಕ ಉದ್ಯಮಗಳು ಇವೆ. ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ. ಈ ಬಗ್ಗೆ ಪೂರ್ವ ತಯಾರಿ ನಡೆಯುತ್ತಿದೆ.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಉದ್ಯಮಗಳು ಈಚೆಗೆ ಸೃಷ್ಟಿಯಾಗಿವೆ. ಕೊರೋನಾ ನಂತರ ಕೃಷಿ ಸೇರಿದಂತೆ ಹಲವು ವಸ್ತುಗಳ ತಯಾರಿಕೆ ನಡೆಯುತ್ತಿದೆ. ಇಂತಹ ಉದ್ಯಮಗಳಿಗೆ ವೇದಿಕೆ ಸೇಷ್ಟಿಸುವ ನೆಲೆಯಲ್ಲಿ ಮೂರು ದಿನಗಳ ಮೇಳವನ್ನು ಆಯೋಜನೆ ಮಾಡಲು ಮುಳ್ಳೇರಿಯಾದಲ್ಲಿ ಸಿದ್ಧತೆ ನಡೆಯುತ್ತಿದೆ. ಪರಿಸರದ ನಡುವೆಯೇ ನಡೆಯಲಿರುವ ಈ ಮೇಳಕ್ಕೆ ಪೂರ್ವ ತಯಾರಿ ನಡೆಯುತ್ತಿದೆ. ಯಾವುದೇ ಮರ ಗಿಡಗಳನ್ನು ಕತ್ತರಿಸದೆ ಅಲ್ಲೇ ವೇದಿಕೆಯನ್ನು ರಚಿಸಿ ಮೇಳವನ್ನು ನಡೆಸಲು ಉದ್ದೇಶಿಸಲಾಗಿದೆ.
ಗ್ರಾಮೀಣ ಉದ್ಯಮಗಳನ್ನು ಬೆಂಬಲಿಸಲು ಹಾಗೂ ಕೃಷಿ ಸಂಬಂಧಿತ ಗೃಹೋದ್ಯಮಗಳು ಹೆಚ್ಚು ಬೆಳವಣಿಗೆಗಳಾದಾಗ ಗ್ರಾಮೀಣ ಆರ್ಥಿಕತೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಿ ವೇದಿಕೆ ಸೃಷ್ಟಿಸಲಾಗುತ್ತಿದೆ ಎಂದು ಕ್ಯಾಂಪ್ಕೋ ನಿರ್ದೇಶಕ ಸತ್ಯನಾರಾಯಣ ಪ್ರಸಾದ್ ಹೇಳುತ್ತಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…