Advertisement
MIRROR FOCUS

ವಿದ್ಯುತ್‌ ಲೈನ್‌ ಕ್ಲಿಯರ್‌ಗೆ ಟೊಂಗೆಯ ಬದಲಿಗೆ ಮರವೇ ಢಮಾರ್….!‌ | ಹಸಿರು ಬೇಡುವ ದೇಶದ ಬೇಡಿಕೆ ನಡುವೆ ಇಲಾಖೆಗಳೇ ಹೀಗೆ ಮಾಡಿದರೆ…?

Share

ವಿಶ್ವದೆಲ್ಲೆಡೆ ಮರ ಉಳಿಸಿ-ಗಿಡ ಬೆಳೆಸಿ , ಹಸಿರು ರಕ್ಷಿಸಿ ಎಂದು ಕರೆ ನೀಡುತ್ತಿದೆ. ತಾಪಮಾನ ವಿಪರೀತವಾಗಿ ದೇಶದ ಹಲವು ಕಡೆ ಜನರು ಸಾಯುತ್ತಿದ್ದಾರೆ. ಈ ತಾಪಮಾನ ಇಳಿಕೆಗೆ ಹಲವು ಪ್ರಯತ್ನಗಳು ನಡೆಯಬೇಕಿದೆ. ಇದರ ಒಂದು ಭಾಗವೇ ಗಿಡ-ಮರಗಳನ್ನು ಉಳಿಸುವುದು ಹಾಗೂ ಬೆಳೆಸುವುದು. ಹೀಗಾಗಿ ಈಗ ಗ್ರಾಮೀಣ ಭಾಗದಲ್ಲಿ ಸವಾಲಿನ ಕೆಲಸ ವಿದ್ಯುತ್‌ ಸರಬರಾಜು ಹಾಗೂ ಗಿಡ-ಮರಗಳ ಉಳಿಸುವುದು…!…….ಮುಂದೆ ಓದಿ…..

ಸುಳ್ಯ ತಾಲೂಕಿನ ಅಮರಮುಡ್ನೂರು, ಅಮರ ಪಡ್ನೂರು,  ಚೊಕ್ಕಾಡಿ-ಪೈಲಾರು-ಕುಕ್ಕುಜಡ್ಕ ಮೊದಲಾದ ಕಡೆಗಳಲ್ಲಿ ವಿದ್ಯುತ್‌ ಲೈನ್‌ ಕಾಡಿನ ನಡುವೆ ಹೋಗುತ್ತಿದೆ. ಗಾಳಿ ಬಂದಾಗ ಮರದ ಗೆಲ್ಲುಗಳು ತಂತಿಗೆ ತಾಗುತ್ತವೆ. ವಿದ್ಯುತ್‌ ಸರಬರಾಜಿಗೆ ತೊಂದರೆಯಾಗುತ್ತದೆ. ಹೀಗಾಗಿ ಪ್ರತೀ ಬಾರಿ ವಿದ್ಯುತ್‌ ಲೈನ್‌ ದುರಸ್ತಿ ಕಾರ್ಯ, ತಂತಿಗೆ ತಾಗುವ ಮರದ ಗೆಲ್ಲು, ಹಸಿರು ಸೊಪ್ಪು ಇತ್ಯಾದಿಗಳನ್ನು ತೆರವು ಮಾಡುವ ಕೆಲಸ ನಡೆಯುತ್ತದೆ. ಈ ಬಾರಿ ವಿದ್ಯುತ್‌ ತಂತಿ ಪಕ್ಕದಲ್ಲಿರುವ ಮರಗಳನ್ನು ಸಣ್ಣ ಗಿಡಗಳನ್ನು ಬುಡದಿಂದಲೇ ಕಡಿದು ಹಾಕಲಾಗಿದೆ. ಈ ಕೃತ್ಯದ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಮರದ, ಗಿಡದ ಗೆಲ್ಲುಗಳನ್ನು ಮಾತ್ರವೇ ಕಡಿಯುವ ಬದಲಾಗಿ ಇಡೀ ಮರವನ್ನು ಕಡಿದು ಹಾಕಿರುವ ಬಗ್ಗೆ ಪರಿಸರ ಪ್ರೇಮಿಗಳು ವಿಷಾದ ವ್ಯಕ್ತಪಡಿಸಿದ್ದಾರೆ. ಇಡೀ ದೇಶವೇ ಹಸಿರು ಉಳಿಸುವ ಬಗ್ಗೆ ಹೆಜ್ಜೆ ಇರಿಸಿದರೆ ಇಲ್ಲಿ ಬುಡದಿಂದಲೇ ಗಿಡ-ಮರಗಳನ್ನು ಕಡಿಯುವ ಅಗತ್ಯ ಇರಲಿಲ್ಲ ಎಂದು ವಿಷಾದಿಸಿದ್ದಾರೆ.…….ಮುಂದೆ ಓದಿ…..

ಗ್ರಾಮೀಣ ಭಾಗಗಳ ಮೂಲಭೂತ ಸೌಕರ್ಯಗಳಲ್ಲಿ ವಿದ್ಯುತ್‌ ಕೂಡಾ ಒಂದು. ವಿದ್ಯುತ್‌ ಸರಬರಾಜಿಗೆ ಹಲವು ಸಮಸ್ಯೆಗಳು ಇವೆ. ಹಲವು ಕಡೆಗಳಲ್ಲಿ ಅರಣ್ಯದ ನಡುವೆಯೇ ವಿದ್ಯುತ್‌ ತಂತಿ ಹಾದುಹೋಗುತ್ತದೆ. ಹೀಗಾಗಿ ಪ್ರತೀ ಬಾರಿ ಮಳೆಗಾಲ ಆರಂಭದ ಹೊತ್ತಿಗೆ ವಿದ್ಯುತ್‌ ತಂತಿ ಕ್ಲಿಯರ್‌ ಮಾಡುವ ಕೆಲಸ ನಡೆಯುತ್ತಿತ್ತು. ಈ ಸಮಯದಲ್ಲಿ ತಂತಿಗೆ ತಾಗುವ ಮರದ ಟೊಂಗೆ, ಹಸಿರು ಬಳ್ಳಿ, ಸಣ್ಣ ಗೆಲ್ಲುಗಳನ್ನು ಸವರುವ ಕೆಲಸ ನಡೆಯುತ್ತಿತ್ತು. ಆದರೆ ಈ ಬಾರಿ ಚೊಕ್ಕಾಡಿಯ ಈ ಪ್ರದೇಶದಲ್ಲಿ ರಸ್ತೆ ಬದಿಯೇ ಮರಗಳನ್ನು ಕಡಿಯಲಾಗಿದೆ. ಇದು ವಿಷಾದಕ್ಕೆ ಕಾರಣವಾಗಿದೆ.…….ಮುಂದೆ ಓದಿ…..

ಒಂದು ಕಡೆ ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯವು ರಸ್ತೆ ಬದಿ ಗಿಡಗಳನ್ನು ನೆಡುವುದು, ಕೆಲವು ಕಡೆ ವಿದ್ಯುತ್‌ ತಂತಿಯ ಕೆಳಭಾಗವೇ ಸಾಲು ಸಾಲು ಗಿಡಗಳನ್ನು ನೆಡುವುದು, ಇನ್ನೊಂದು ಕಡೆ ಮರದ ಗೆಲ್ಲುಗಳು ತಾಗುತ್ತವೆ ಎಂದು ಮರವನ್ನೇ ಕಡಿಯುವುದು..!. ಈ ವೈರುಧ್ಯದ ಬಗ್ಗೆಯೇ ಈಗ ಹೆಚ್ಚು ಚರ್ಚೆಯಾಗಬೇಕಿದೆ ಎಂಬುದು ಪರಿಸರ ಪ್ರಿಯರ ಅಭಿಪ್ರಾಯ.

ಈಚೆಗೆ ಕೇರಳ ಹೈಕೋರ್ಟ್‌ ಕೂಡಾ ತೀರ್ಪೊಂದನ್ನು ನೀಡಿದೆ. ಅಭಿವೃದ್ಧಿ ಅಥವಾ ವಾಣಿಜ್ಯ ಉದ್ದೇಶದ ಸಂದರ್ಭ ಇಡೀ ಮರವನ್ನೇ ಉರುಳಿಸಬಾರದು, ತೊಂದರೆಯಾಗುವ ಮರದ ಟೊಂಗೆಯನ್ನು ಕತ್ತರಿಸಿ ಅಥವಾ ಸಮಸ್ಯೆಯಾಗುವ ಭಾಗದಿಂದ ಮರವನ್ನು ಕತ್ತರಿಸಿ, ಇಡೀ ಮರವನ್ನು ತುಂಡರಿಸಬಾರದು ಎಂದು ತೀರ್ಪು ನೀಡಿದೆ. ಇದರ ಅರ್ಥ ಇಡೀ ದೇಶಕ್ಕೆ ಇಂದು ಹಸಿರಿನ ಅವಶ್ಯಕತೆ ಇದೆ. ಅಗತ್ಯಕ್ಕೆ ತಕ್ಕಷ್ಟು ಮಾತ್ರವೇ ಗೆಲ್ಲುಗಳನ್ನು ತುಂಡರಿಸಿ, ಇಡೀ ಮರವನ್ನು ಕಡಿಯುವುದು ಕಡಿಮೆಯಾಗಲಿ ಎನ್ನುವುದು ಆಶಯವಾಗಿದೆ. ಹವಾಮಾನ ವೈಪರೀತ್ಯ ನಿಯಂತ್ರಣಕ್ಕೆ ಪರಿಸರದ ಉಳಿವಿನಿಂದ ಮಾತ್ರಾ ಸಾಧ್ಯವಿದೆ. ಇಲಾಖೆಗಳು ಈ ನೆಲೆಯಲ್ಲಿ ಯೋಚನೆ ಮಾಡಬೇಕಿದೆ. ಇನ್ನು ಮುಂದೆ ಅನಗತ್ಯವಾಗಿ ಸಾರ್ವಜನಿಕ ಉದ್ದೇಶಗಳಲ್ಲಿ ಬೇಕಾಬಿಟ್ಟಿ ಮರ ತುಂಡರಿಸಿದಂತೆ ಎಚ್ಚರಿಕೆ ವಹಿಸಬೇಕಿದೆ. ಅದೂ ಇಲಾಖೆಗಳು ಈ ದೃಷ್ಟಿಯಿಂದ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ.

 

Electricity supply is disrupted, it can have serious consequences for the residents of these rural areas. Not only does the cutting of trees for the installation of electricity lines harm the environment, but it also puts wildlife habitats at risk. Finding a balance between providing electricity to rural communities and preserving the forests is crucial. Sustainable solutions such as underground cabling or utilizing renewable energy sources can help mitigate the impact on forests while ensuring reliable electricity supply. It is essential for policymakers and stakeholders to work together to address this issue in a responsible and sustainable manner.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago