ಜ.26 : ರೂರಲ್‌ ಮಿರರ್‌ ಪ್ರಕಾಶನ ವತಿಯಿಂದ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆ

January 25, 2021
5:54 AM
ರೂರಲ್‌ ಮಿರರ್‌ ಹೊಸ ಹೆಜ್ಜೆ ಇರಿಸಿದೆ. ಕೊರೋನಾ ಕೃಪೆಯ ವರಗಳತ್ತ ಇಣುಕು ನೋಟದ ಮುಸ್ಸಂಜೆಯ ಹೊಂಗಿರಣ
ಎಂಬ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಹಿರಿಯ ಬರಹಗಾರ, ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ ಈ ಕೃತಿಯನ್ನು ರೂರಲ್‌ ಮಿರರ್‌ ಪ್ರಕಾಶಿಸಿದೆ. ರೂರಲ್‌ ಮಿರರ್‌ ಈ ಚೊಚ್ಚಲ  ಕೃತಿಯು ಜ.26 ರಂದು ಬಿಡುಗಡೆಗೊಳ್ಳಲಿದೆ.

Advertisement

ಪಾಸಿಟಿವ್‌ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್‌ ಮಿರರ್‌ ಇದೀಗ ಕೊರೋನಾ ಸಮಯದ ಪಾಸಿಟಿವ್‌ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್‌ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್‌ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್‌ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.

ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.

ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ
February 20, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror