ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…