MIRROR FOCUS

ಜ.26 : ರೂರಲ್‌ ಮಿರರ್‌ ಪ್ರಕಾಶನ ವತಿಯಿಂದ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆ

Share
ರೂರಲ್‌ ಮಿರರ್‌ ಹೊಸ ಹೆಜ್ಜೆ ಇರಿಸಿದೆ. ಕೊರೋನಾ ಕೃಪೆಯ ವರಗಳತ್ತ ಇಣುಕು ನೋಟದ ಮುಸ್ಸಂಜೆಯ ಹೊಂಗಿರಣ
ಎಂಬ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಹಿರಿಯ ಬರಹಗಾರ, ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ ಈ ಕೃತಿಯನ್ನು ರೂರಲ್‌ ಮಿರರ್‌ ಪ್ರಕಾಶಿಸಿದೆ. ರೂರಲ್‌ ಮಿರರ್‌ ಈ ಚೊಚ್ಚಲ  ಕೃತಿಯು ಜ.26 ರಂದು ಬಿಡುಗಡೆಗೊಳ್ಳಲಿದೆ.

ಪಾಸಿಟಿವ್‌ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್‌ ಮಿರರ್‌ ಇದೀಗ ಕೊರೋನಾ ಸಮಯದ ಪಾಸಿಟಿವ್‌ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್‌ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್‌ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್‌ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.

ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.

ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

 

 

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

20 minutes ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

2 hours ago

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

10 hours ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

12 hours ago