ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…