ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…