ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…