ಗ್ರಾಮೀಣ ಜನರೇ ಎಚ್ಚರ.. | ಕಂಬಳಿ ಮಾರಾಟದ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ | ಒಂಟಿ ಮನೆ, ಒಂಟಿ ಮಹಿಳೆಯರೇ ಹುಷಾರು.. | |

October 21, 2022
12:07 PM

ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಮಾರಾಟ ಜಾಲಗಳು ವಿಸ್ತಾರವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕಡೆಗೆ ಗಮನಹರಿಸಲಾಗುತ್ತಿದೆ.

Advertisement

ದೋಳ್ಪಾಡಿಯಲ್ಲಿ ಈ ಘಟನೆ ನಡೆದ ತಕ್ಷಣವೇ  ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆ ಮನೆಗೆ ಬಟ್ಟೆ, ಕಂಬಳಿ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟ ಮಾಡುವ ತಂಡಗಳು ಒಂಟಿ ಮನೆ ಹಾಗೂ ಒಬ್ಬಂಟಿ ಮಹಿಳೆಯರು ಇರುವ ಮನೆಯನ್ನು  ಗುರುತಿಸಿಕೊಂಡು ಆಗಾಗ ಭೇಟಿ ನೀಡುತ್ತಾರೆ. ಸ್ವಲ್ಪ ಪರಿಚಯವಾದ ಬಳಿಕ ಮನೆ ದರೋಡೆ, ಅತ್ಯಾಚಾರ ಸೇರಿದಂತೆ ಕಳ್ಳತನವೂ ನಡೆಸುತ್ತಾರೆ , ಹೀಗಾಗಿ ಎಚ್ಚರಿಕೆ ಇರಬೇಕುನ ಎಂದು ಆಗಾಗ ಪೊಲೀಸ್‌ ಇಲಾಖೆ ಎಚ್ಚರಿಸುತ್ತದೆ. ಕೆಲವು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತಲೆಹೊರೆ ಮೂಲಕ ಮಾರಾಟ ಮಾಡುವ ವಸ್ತುಗಳಿದ್ದರೆ ಪಂಚಾಯತ್‌ ವ್ಯಾಪ್ತಿಯಲ್ಲಿ ಮೊದಲೇ ನೋಂದಣಿ ಮಾಡಿ ಅನುಮತಿ ಪಡೆದು ಮನೆ ಮನೆಗೆ ತೆರಳಬೇಕು ಎಂದು ಕಟ್ಟು ನಿಟ್ಟಾದ ನಿಯಮ ಜಾರಿ ಮಾಡಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ
May 4, 2025
10:37 PM
by: The Rural Mirror ಸುದ್ದಿಜಾಲ
ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |
May 4, 2025
10:33 PM
by: The Rural Mirror ಸುದ್ದಿಜಾಲ
ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ
May 4, 2025
2:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |
May 4, 2025
11:59 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group