ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಮಾರಾಟ ಜಾಲಗಳು ವಿಸ್ತಾರವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕಡೆಗೆ ಗಮನಹರಿಸಲಾಗುತ್ತಿದೆ.
ದೋಳ್ಪಾಡಿಯಲ್ಲಿ ಈ ಘಟನೆ ನಡೆದ ತಕ್ಷಣವೇ ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಮನೆಗೆ ಬಟ್ಟೆ, ಕಂಬಳಿ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟ ಮಾಡುವ ತಂಡಗಳು ಒಂಟಿ ಮನೆ ಹಾಗೂ ಒಬ್ಬಂಟಿ ಮಹಿಳೆಯರು ಇರುವ ಮನೆಯನ್ನು ಗುರುತಿಸಿಕೊಂಡು ಆಗಾಗ ಭೇಟಿ ನೀಡುತ್ತಾರೆ. ಸ್ವಲ್ಪ ಪರಿಚಯವಾದ ಬಳಿಕ ಮನೆ ದರೋಡೆ, ಅತ್ಯಾಚಾರ ಸೇರಿದಂತೆ ಕಳ್ಳತನವೂ ನಡೆಸುತ್ತಾರೆ , ಹೀಗಾಗಿ ಎಚ್ಚರಿಕೆ ಇರಬೇಕುನ ಎಂದು ಆಗಾಗ ಪೊಲೀಸ್ ಇಲಾಖೆ ಎಚ್ಚರಿಸುತ್ತದೆ. ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲೆಹೊರೆ ಮೂಲಕ ಮಾರಾಟ ಮಾಡುವ ವಸ್ತುಗಳಿದ್ದರೆ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲೇ ನೋಂದಣಿ ಮಾಡಿ ಅನುಮತಿ ಪಡೆದು ಮನೆ ಮನೆಗೆ ತೆರಳಬೇಕು ಎಂದು ಕಟ್ಟು ನಿಟ್ಟಾದ ನಿಯಮ ಜಾರಿ ಮಾಡಿದೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…