ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಮಾರಾಟ ಜಾಲಗಳು ವಿಸ್ತಾರವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕಡೆಗೆ ಗಮನಹರಿಸಲಾಗುತ್ತಿದೆ.
ದೋಳ್ಪಾಡಿಯಲ್ಲಿ ಈ ಘಟನೆ ನಡೆದ ತಕ್ಷಣವೇ ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಮನೆಗೆ ಬಟ್ಟೆ, ಕಂಬಳಿ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟ ಮಾಡುವ ತಂಡಗಳು ಒಂಟಿ ಮನೆ ಹಾಗೂ ಒಬ್ಬಂಟಿ ಮಹಿಳೆಯರು ಇರುವ ಮನೆಯನ್ನು ಗುರುತಿಸಿಕೊಂಡು ಆಗಾಗ ಭೇಟಿ ನೀಡುತ್ತಾರೆ. ಸ್ವಲ್ಪ ಪರಿಚಯವಾದ ಬಳಿಕ ಮನೆ ದರೋಡೆ, ಅತ್ಯಾಚಾರ ಸೇರಿದಂತೆ ಕಳ್ಳತನವೂ ನಡೆಸುತ್ತಾರೆ , ಹೀಗಾಗಿ ಎಚ್ಚರಿಕೆ ಇರಬೇಕುನ ಎಂದು ಆಗಾಗ ಪೊಲೀಸ್ ಇಲಾಖೆ ಎಚ್ಚರಿಸುತ್ತದೆ. ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲೆಹೊರೆ ಮೂಲಕ ಮಾರಾಟ ಮಾಡುವ ವಸ್ತುಗಳಿದ್ದರೆ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲೇ ನೋಂದಣಿ ಮಾಡಿ ಅನುಮತಿ ಪಡೆದು ಮನೆ ಮನೆಗೆ ತೆರಳಬೇಕು ಎಂದು ಕಟ್ಟು ನಿಟ್ಟಾದ ನಿಯಮ ಜಾರಿ ಮಾಡಿದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…