ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ
ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…