ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ
ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…