ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ
ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…