ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ
ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…