ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ
ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…