ಐಐಟಿ ಖರಗಪುರ ನಡೆಸಿದ 2022ರ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ -ಗೇಟ್ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ದ್ವಿತೀಯ ವರ್ಷದ ಗ್ರಾಮೀಣ ಭಾಗದ ವಿದ್ಯಾರ್ಥಿನಿ ಸವಿತಾ ಎಂ. ಎಸ್. ರಾಷ್ಟ್ರಮಟ್ಟದಲ್ಲಿ ಉತ್ತಮ ರಾಂಕ್ ನೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಫೆಲೋಶಿಪ್ನೊಂದಿಗೆ ಸಂಶೋಧನಾರ್ಥಿಯಾಗಿ ಸೇರಲು ಅರ್ಹತೆ ಪಡೆದಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಇವರು ಈಗಾಗಲೇ ಇಸ್ರೋ (ಐ.ಎ..ಎಸ್ ಬೆಂಗಳೂರು ಪ್ರಾಯೋಜಿತ), ಐ.ಐ.ಎಸ್.ಎಸ್ ತಿರುವನಂತಪುರಂ, ಐ.ಐ.ಎ ಬೆಂಗಳೂರು ಮೊದಲಾದೆಡೆ ಸಮ್ಮರ್ ರಿಸರ್ಚ್ ಫೆಲೋಶಿಪ್ಗೆ ಆಯ್ಕೆಗೊಂಡು ಕಿರು ಸಂಶೋಧನೆಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ.
ಇವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲರಾದ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹಾಗೂ ವಿಭಾಗದ ಸಂಯೋಜಕ ಡಾ.ಇ ದೀಪಕ್ ಡಿಸಿಲ್ವ ಅಭಿನಂದಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಶಿವಪ್ಪ ಗೌಡ ಮತ್ತುಯಮುನಾ ದಂಪತಿಗಳ ಪುತ್ರಿಯಾಗಿರುವ ಇವರು, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಸರಕಾರಿ ಪ್ರೌಢಶಾಲೆ ದೇಲಂಪಾಡಿ, ಪಿಯುಸಿಯನ್ನು ಸರಕಾರಿ ಪದವಿಪೂರ್ವ ಕಾಲೇಜು ಪುತ್ತೂರು ಹಾಗೂ ಬಿ.ಎಸ್ಸಿ. ಪದವಿಯನ್ನು ಸಂತ ಫಿಲೋಮಿನಾ ಕಾಲೇಜಿನಲ್ಲಿಉತ್ತಮ ಶ್ರೇಣಿಯಲ್ಲಿಪಡೆದಿರುತ್ತಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…