Advertisement
ಸುದ್ದಿಗಳು

ಮನೆ ಬಾಗಿಲಲ್ಲೇ ತೆರಿಗೆ ಪಾವತಿ ತಂತ್ರಾಂಶ ಅಭಿವೃದ್ಧಿ | ಗ್ರಾಮಗಳಲ್ಲಿ ಜಾರಿಯಾಗಲಿದೆ ನೂತನ ತಂತ್ರಾಂಶ |

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ‌. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ.‌ ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.‌

ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.‌

ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

12 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

18 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago