Advertisement
ಸುದ್ದಿಗಳು

ಮನೆ ಬಾಗಿಲಲ್ಲೇ ತೆರಿಗೆ ಪಾವತಿ ತಂತ್ರಾಂಶ ಅಭಿವೃದ್ಧಿ | ಗ್ರಾಮಗಳಲ್ಲಿ ಜಾರಿಯಾಗಲಿದೆ ನೂತನ ತಂತ್ರಾಂಶ |

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ‌. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ.‌ ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.‌

ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.‌

ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

2 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

14 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago