ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.
ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ. ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.
ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…