Advertisement
ಸುದ್ದಿಗಳು

ಮನೆ ಬಾಗಿಲಲ್ಲೇ ತೆರಿಗೆ ಪಾವತಿ ತಂತ್ರಾಂಶ ಅಭಿವೃದ್ಧಿ | ಗ್ರಾಮಗಳಲ್ಲಿ ಜಾರಿಯಾಗಲಿದೆ ನೂತನ ತಂತ್ರಾಂಶ |

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ‌. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ.‌ ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.‌

ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.‌

ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

3 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

4 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

5 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

19 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

19 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago