ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.
ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ. ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.
ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…