ಗ್ರಾಮೀಣ ಭಾಗದಲ್ಲಿ ಕೌಶಲ್ಯ ತರಬೇತಿ | ಗುತ್ತಿಗಾರಿನಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ನಡೆಯುತ್ತಿದೆ ಕೌದಿ ಕೌಶಲ್ಯ ತರಬೇತಿ |

October 27, 2023
11:10 AM

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ  ಹಾಗೂ ವಿಜಯ ಗ್ರಾಮ ಅಭಿವೃದ್ಧಿ ಸಮಿತಿ ನಾಲ್ಕೂರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿದೆ.

ತರಬೇತಿ ಕಾರ್ಯಕ್ರಮದಲ್ಲಿ ಗುತ್ತಿಗಾರು, ದೇವಚಳ್ಳ,ಉಬರಡ್ಕ,ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರ ,ಅಜ್ಜಾವರ, ಮಡಪ್ಪಾಡಿ ಸೇರಿದಂತೆ 7 ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಹಾಗೂ ಕಿಶೋರಿಯರು MBK, LCRP, ಸಖಿ ಗುತ್ತಿಗಾರು ಗ್ರಂಥಾಲಯ ಗ್ರಂಥಪಾಲಕಿ ಹಾಜರಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್  ನೆರವೇರಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ನಾಲ್ಕೂರು ಅಧ್ಯಕ್ಷ  ಉದಯಕುಮಾರ್ ಡಿ. ಆರ್,ಕಾರ್ಯದರ್ಶಿ  ದಿನೇಶ್ ಹಾಲೆಮಜಲು , ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ದಿವ್ಯ ಸುಜನ್ ಗುಡ್ಡೆಮನೆ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು  ಶ್ವೇತ, ತರಬೇತಿ ಸಂಪನ್ಮೂಲ ವ್ಯಕ್ತಿ ಮನೋರಮಾ ಮುಚ್ಚಾರ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ  ನೀಲಾವತಿ ಮೊಗ್ರ ಪ್ರಾರ್ಥಿಸಿ,ಲತಾ ಆಜಡ್ಕ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ ಮತ್ತು ಶಿಶಿಮ ಜಾಕೆ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror