Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಕೌಶಲ್ಯ ತರಬೇತಿ | ಗುತ್ತಿಗಾರಿನಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ನಡೆಯುತ್ತಿದೆ ಕೌದಿ ಕೌಶಲ್ಯ ತರಬೇತಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ  ಹಾಗೂ ವಿಜಯ ಗ್ರಾಮ ಅಭಿವೃದ್ಧಿ ಸಮಿತಿ ನಾಲ್ಕೂರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿದೆ.

ತರಬೇತಿ ಕಾರ್ಯಕ್ರಮದಲ್ಲಿ ಗುತ್ತಿಗಾರು, ದೇವಚಳ್ಳ,ಉಬರಡ್ಕ,ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರ ,ಅಜ್ಜಾವರ, ಮಡಪ್ಪಾಡಿ ಸೇರಿದಂತೆ 7 ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಹಾಗೂ ಕಿಶೋರಿಯರು MBK, LCRP, ಸಖಿ ಗುತ್ತಿಗಾರು ಗ್ರಂಥಾಲಯ ಗ್ರಂಥಪಾಲಕಿ ಹಾಜರಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್  ನೆರವೇರಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ನಾಲ್ಕೂರು ಅಧ್ಯಕ್ಷ  ಉದಯಕುಮಾರ್ ಡಿ. ಆರ್,ಕಾರ್ಯದರ್ಶಿ  ದಿನೇಶ್ ಹಾಲೆಮಜಲು , ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ದಿವ್ಯ ಸುಜನ್ ಗುಡ್ಡೆಮನೆ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು  ಶ್ವೇತ, ತರಬೇತಿ ಸಂಪನ್ಮೂಲ ವ್ಯಕ್ತಿ ಮನೋರಮಾ ಮುಚ್ಚಾರ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ  ನೀಲಾವತಿ ಮೊಗ್ರ ಪ್ರಾರ್ಥಿಸಿ,ಲತಾ ಆಜಡ್ಕ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ ಮತ್ತು ಶಿಶಿಮ ಜಾಕೆ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

10 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

10 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

10 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

21 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago