Advertisement
MIRROR FOCUS

Women’s Day | ಗ್ರಾಮೀಣ ಭಾಗದ ಸ್ವಾಭಿಮಾನಿ ಮಹಿಳೆ | 2 ಎಕೆರೆ ಜಮೀನಿನಲ್ಲಿ ಸಮಗ್ರ ಕೃಷಿ |

Share

ಗ್ರಾಮೀಣ ಭಾಗದಲ್ಲಿ ಅನೇಕ ಮಹಿಳೆಯರು ಹಲವಾರು ಸಂಕಷ್ಟಗಳ ನಡುವೆಯೂ ಸ್ವಾಭಿಮಾನಿಯಾಗಿ ಬದುಕುತ್ತಾರೆ. ಮನೆ ನಿರ್ವಹಣೆ, ಆರ್ಥಿಕ ನಿರ್ವಹಣೆ , ಕೃಷಿ ನಿರ್ವಹಣೆ ಇದೆಲ್ಲವೂ ಮಹಿಳೆಯೇ ನಿರ್ವಹಿಸಬೇಕಾದ ಸಂದರ್ಭ ಇರುತ್ತದೆ. ರೈತ ಹೇಗೆ ದೇಶದ ಬೆನ್ನೆಲುಬಾಗಿದ್ದಾನೆಯೋ, ಮಹಿಳೆ ಪ್ರತೀ ಕುಟುಂಬದ ಬೆನ್ನೆಲುಬೂ ಹೌದು. ಅಂತಹ ಮಾದರಿ ಮಹಿಳೆಯೊಬ್ಬರು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಗಿರಿಜ.

ಗಿರಿಜ

ಅಜ್ಜಾವರದ ಮಹಿಳೆ ಗಿರಿಜ. ಸಮಾಜದ ವ್ಯವಸ್ಥೆಯಲ್ಲಿ ಹಿಂದುಳಿದ ವರ್ಗ ಮಹಿಳೆ ಎಂದು ಕರೆಯಲ್ಪಡುವ ಕುಟುಂಬ ಇದು. ಆದರೆ ಸ್ವಾಭಿಮಾನದ ಬದುಕಿನಲ್ಲಿ ಎಲ್ಲರೊಂದಿಗೆ ನಿಲ್ಲುವ ಮಹಿಳೆ ಗಿರಿಜ. ತನ್ನ ಎರಡು ಎಕ್ರೆ ಜಮೀನಿನಲ್ಲಿ ಅಡಿಕೆ, ಕಾಳುಮೆಣಸು, ಕೊಕೋ, ಗೇರು, ಬಾಳೆ, ತೆಂಗು ಸಹಿತ ಸಮಗ್ರ ಕೃಷಿಯನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಇವರ ಪತಿ ತೀರಿಕೊಂಡ ನಂತರ ಇಡೀ ಕುಟುಂಬದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದಾರೆ. ಮಗನಿಗೆ ಸಮೀಪದಲ್ಲಿಯೇ ಆಸ್ತಿ ನೀಡಿದ್ದಾರೆ, ವಿಧವೆ ಮಹಿಳೆ ಹಾಗೂ ಅವರ ಮಕ್ಕಳ ಜೊತೆಗೆ ಇಡೀ ಕುಟುಂಬ ನಿರ್ವಗಣೆ ಮಾಡುತ್ತಿದ್ದಾರೆ. ಕಾಳುಮೆಣಸು ಕೃಷಿ ಅನೇಕ ವರ್ಷಗಳಿಂದಲೂ ಇದೆ. ಈ ಕಾಳುಮೆಣಸು ಇವರ ಬದುಕಿನ ಕೈ ಹಿಡಿದಿದೆ. ಆರ್ಥಿಕವಾದ ಆದಾಯಕ್ಕೂ ಕಾರಣವಾಗಿದೆ. ಕೃಷಿ ಸಾಲ ಹೊರತುಪಡಿಸಿ ಇತರ ಯಾವುದೇ ಸಾಲ ಇಲ್ಲದೆ ಯಶಸ್ವಿ ಬದುಕನ್ನು ನಡೆಸುತ್ತಿದ್ದಾರೆ ಗಿರಿಜ.

ಕಳೆದ ವರ್ಷದವರೆಗೆ ಎರಡು-ಮೂರು ದನಗಳನ್ನು ಸಾಕಿ ಡೈರಿಗೆ ಹಾಲನ್ನೂ ಹಾಕುತ್ತಿದ್ದ ಗಿರಿಜ, ಬೆಳಗಿನಿಂದ ಇಡೀ ಕೆಲಸ ಮಾಡಿ, ಪಶುಪಾಲನೆ ಮಾಡಿ ಬಳಿಕ ದುಡಿಮೆಗೂ ತೆರಳುತ್ತಿದ್ದ ಗಿರಿಜ ಸಂಜೆ ಮನೆಗೆ ಬಂದು ತೋಟದ ಕೆಲಸವನ್ನೂ ಮಾಡುತ್ತಿದ್ದರು. ಇದೀಗ ಪತಿ ತೀರಿಕೊಂಡ ಬಳಿಕ ಹೈನುಗಾರಿಕೆಗೆ ವಿರಾಮ ನೀಡಿದ್ದಾರೆ. ತೋಟದ ಕೆಲಸವನ್ನು ಮುಂದುವರಿಸಿದ್ದರು, ಗಿರಿಜ ಅವರ ಮಕ್ಕಳೂ ಕೃಷಿಗೆ ಸಾತ್‌  ನೀಡುತ್ತಿದ್ದಾರೆ. ಕಾಳುಮೆಣಸು ಕೊಯ್ಯಲು ಬೇರೆಯವರನ್ನೂ ಕೂಡಾ ಕಾರ್ಮಿಕರಾಗಿ ಕರೆಯುತ್ತಾರೆ. ಸದ್ಯ ವರ್ಷಕ್ಕೆ ಎರಡು ಕ್ವಿಂಟಾಲ್‌ ಕಾಳುಮೆಣಸು ಆಗುತ್ತಿದೆ. ಸಹಜ , ಸಾವಯವ ಮಾದರಿಯ ಕೃಷಿಯನ್ನೇ ಮುಂದುವರಿಸುತ್ತಿದ್ದಾರೆ ಗಿರಿಜ.

ಮಹಿಳಾ ದಿನಾಚರಣೆಯಂದು ಸಾವಿರಾರು ಮಹಿಳೆಯರನ್ನು ಗುರುತಿಸುವ ವೇಳೆ ಸ್ವಾಭಿಮಾನಿಯಾಗಿ ಬೆಳೆದ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರ ಶ್ರಮವನ್ನು ನೆನಪಿಸಿಕೊಳ್ಳುತ್ತಾ ದ ರೂರಲ್‌ ಮಿರರ್‌.ಕಾಂ ಗಿರಿಜ ಅವರ ಪರಿಚಯ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

54 minutes ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

5 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

5 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

16 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

16 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

20 hours ago