MIRROR FOCUS

Women’s Day | ಗ್ರಾಮೀಣ ಭಾಗದ ಸ್ವಾಭಿಮಾನಿ ಮಹಿಳೆ | 2 ಎಕೆರೆ ಜಮೀನಿನಲ್ಲಿ ಸಮಗ್ರ ಕೃಷಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದಲ್ಲಿ ಅನೇಕ ಮಹಿಳೆಯರು ಹಲವಾರು ಸಂಕಷ್ಟಗಳ ನಡುವೆಯೂ ಸ್ವಾಭಿಮಾನಿಯಾಗಿ ಬದುಕುತ್ತಾರೆ. ಮನೆ ನಿರ್ವಹಣೆ, ಆರ್ಥಿಕ ನಿರ್ವಹಣೆ , ಕೃಷಿ ನಿರ್ವಹಣೆ ಇದೆಲ್ಲವೂ ಮಹಿಳೆಯೇ ನಿರ್ವಹಿಸಬೇಕಾದ ಸಂದರ್ಭ ಇರುತ್ತದೆ. ರೈತ ಹೇಗೆ ದೇಶದ ಬೆನ್ನೆಲುಬಾಗಿದ್ದಾನೆಯೋ, ಮಹಿಳೆ ಪ್ರತೀ ಕುಟುಂಬದ ಬೆನ್ನೆಲುಬೂ ಹೌದು. ಅಂತಹ ಮಾದರಿ ಮಹಿಳೆಯೊಬ್ಬರು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಗಿರಿಜ.

Advertisement
Advertisement
ಗಿರಿಜ

ಅಜ್ಜಾವರದ ಮಹಿಳೆ ಗಿರಿಜ. ಸಮಾಜದ ವ್ಯವಸ್ಥೆಯಲ್ಲಿ ಹಿಂದುಳಿದ ವರ್ಗ ಮಹಿಳೆ ಎಂದು ಕರೆಯಲ್ಪಡುವ ಕುಟುಂಬ ಇದು. ಆದರೆ ಸ್ವಾಭಿಮಾನದ ಬದುಕಿನಲ್ಲಿ ಎಲ್ಲರೊಂದಿಗೆ ನಿಲ್ಲುವ ಮಹಿಳೆ ಗಿರಿಜ. ತನ್ನ ಎರಡು ಎಕ್ರೆ ಜಮೀನಿನಲ್ಲಿ ಅಡಿಕೆ, ಕಾಳುಮೆಣಸು, ಕೊಕೋ, ಗೇರು, ಬಾಳೆ, ತೆಂಗು ಸಹಿತ ಸಮಗ್ರ ಕೃಷಿಯನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಇವರ ಪತಿ ತೀರಿಕೊಂಡ ನಂತರ ಇಡೀ ಕುಟುಂಬದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದಾರೆ. ಮಗನಿಗೆ ಸಮೀಪದಲ್ಲಿಯೇ ಆಸ್ತಿ ನೀಡಿದ್ದಾರೆ, ವಿಧವೆ ಮಹಿಳೆ ಹಾಗೂ ಅವರ ಮಕ್ಕಳ ಜೊತೆಗೆ ಇಡೀ ಕುಟುಂಬ ನಿರ್ವಗಣೆ ಮಾಡುತ್ತಿದ್ದಾರೆ. ಕಾಳುಮೆಣಸು ಕೃಷಿ ಅನೇಕ ವರ್ಷಗಳಿಂದಲೂ ಇದೆ. ಈ ಕಾಳುಮೆಣಸು ಇವರ ಬದುಕಿನ ಕೈ ಹಿಡಿದಿದೆ. ಆರ್ಥಿಕವಾದ ಆದಾಯಕ್ಕೂ ಕಾರಣವಾಗಿದೆ. ಕೃಷಿ ಸಾಲ ಹೊರತುಪಡಿಸಿ ಇತರ ಯಾವುದೇ ಸಾಲ ಇಲ್ಲದೆ ಯಶಸ್ವಿ ಬದುಕನ್ನು ನಡೆಸುತ್ತಿದ್ದಾರೆ ಗಿರಿಜ.

ಕಳೆದ ವರ್ಷದವರೆಗೆ ಎರಡು-ಮೂರು ದನಗಳನ್ನು ಸಾಕಿ ಡೈರಿಗೆ ಹಾಲನ್ನೂ ಹಾಕುತ್ತಿದ್ದ ಗಿರಿಜ, ಬೆಳಗಿನಿಂದ ಇಡೀ ಕೆಲಸ ಮಾಡಿ, ಪಶುಪಾಲನೆ ಮಾಡಿ ಬಳಿಕ ದುಡಿಮೆಗೂ ತೆರಳುತ್ತಿದ್ದ ಗಿರಿಜ ಸಂಜೆ ಮನೆಗೆ ಬಂದು ತೋಟದ ಕೆಲಸವನ್ನೂ ಮಾಡುತ್ತಿದ್ದರು. ಇದೀಗ ಪತಿ ತೀರಿಕೊಂಡ ಬಳಿಕ ಹೈನುಗಾರಿಕೆಗೆ ವಿರಾಮ ನೀಡಿದ್ದಾರೆ. ತೋಟದ ಕೆಲಸವನ್ನು ಮುಂದುವರಿಸಿದ್ದರು, ಗಿರಿಜ ಅವರ ಮಕ್ಕಳೂ ಕೃಷಿಗೆ ಸಾತ್‌  ನೀಡುತ್ತಿದ್ದಾರೆ. ಕಾಳುಮೆಣಸು ಕೊಯ್ಯಲು ಬೇರೆಯವರನ್ನೂ ಕೂಡಾ ಕಾರ್ಮಿಕರಾಗಿ ಕರೆಯುತ್ತಾರೆ. ಸದ್ಯ ವರ್ಷಕ್ಕೆ ಎರಡು ಕ್ವಿಂಟಾಲ್‌ ಕಾಳುಮೆಣಸು ಆಗುತ್ತಿದೆ. ಸಹಜ , ಸಾವಯವ ಮಾದರಿಯ ಕೃಷಿಯನ್ನೇ ಮುಂದುವರಿಸುತ್ತಿದ್ದಾರೆ ಗಿರಿಜ.

ಮಹಿಳಾ ದಿನಾಚರಣೆಯಂದು ಸಾವಿರಾರು ಮಹಿಳೆಯರನ್ನು ಗುರುತಿಸುವ ವೇಳೆ ಸ್ವಾಭಿಮಾನಿಯಾಗಿ ಬೆಳೆದ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರ ಶ್ರಮವನ್ನು ನೆನಪಿಸಿಕೊಳ್ಳುತ್ತಾ ದ ರೂರಲ್‌ ಮಿರರ್‌.ಕಾಂ ಗಿರಿಜ ಅವರ ಪರಿಚಯ ಮಾಡಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

1 hour ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

1 hour ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

1 hour ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

4 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

7 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

7 hours ago