Advertisement
ಸುದ್ದಿಗಳು

ನಿಟ್ಟೆ–ಫರಂಗಿಪೇಟೆಯಲ್ಲಿ RUTAG ಸ್ಮಾರ್ಟ್‌ ವಿಲೇಜ್‌ ಕೇಂದ್ರ ಸ್ಥಾಪನೆ

Share

ಗ್ರಾಮೀಣ ಪ್ರದೇಶಗಳ ಸಮಸ್ಯೆಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸುವ ಉದ್ದೇಶದಿಂದ ನಿಟ್ಟೆ ಮತ್ತು ಫರಂಗಿಪೇಟೆಯಲ್ಲಿ RUTAG (Rural Technology Action Group) ಸ್ಮಾರ್ಟ್‌ ವಿಲೇಜ್‌ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.

ಈ ಯೋಜನೆ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಮುಂದಾಳತ್ವದಲ್ಲಿ ಕಾರ್ಯರೂಪಕ್ಕೆ ಬರುತ್ತಿದ್ದು, ಕೃಷಿ, ಗ್ರಾಮೀಣ ಜೀವನೋಪಾಯ, ಆರೋಗ್ಯ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಸರಳ, ಕಡಿಮೆ ವೆಚ್ಚದ ಹಾಗೂ ಸ್ಥಳೀಯ ಅಗತ್ಯಗಳಿಗೆ ಹೊಂದುವ ತಂತ್ರಜ್ಞಾನಗಳನ್ನು ಗ್ರಾಮೀಣ ಜನರಿಗೆ ತಲುಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ತಜ್ಞರು, ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂಶೋಧನೆ ಕೇವಲ ಪ್ರಯೋಗಾಲಯಗಳಲ್ಲಿ ಸೀಮಿತವಾಗದೆ, ಗ್ರಾಮೀಣ ಜನಜೀವನಕ್ಕೆ ನೇರ ಲಾಭ ನೀಡಬೇಕು ಎಂದು ಅಭಿಪ್ರಾಯಪಟ್ಟರು. RUTAG ಕೇಂದ್ರಗಳು ಈ ಗುರಿಯನ್ನು ಸಾಧಿಸಲು ಸೇತುವೆಯಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ರೈತರು, ಮಹಿಳೆಯರು ಮತ್ತು ಯುವಕರಿಗೆ ಲಾಭ : ಈ ಸ್ಮಾರ್ಟ್‌ ವಿಲೇಜ್‌ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ಕೃಷಿ ಉಪಕರಣಗಳು, ಮಹಿಳೆಯರಿಗೆ ಉದ್ಯೋಗ ಅವಕಾಶಗಳು, ಯುವಕರಿಗೆ ಕೌಶಲ್ಯಾಧಾರಿತ ತರಬೇತಿ, ಅಂಗವಿಕಲರು ಮತ್ತು ದೃಷ್ಟಿಹೀನರಿಗೆ ಸಹಾಯಕ ತಂತ್ರಜ್ಞಾನ ಒದಗಿಸುವ ಯೋಜನೆ ಇದೆ.

ಗ್ರಾಮೀಣ ಅಭಿವೃದ್ಧಿಗೆ ಬೆಂಬಲ: RUTAG ಕೇಂದ್ರಗಳು ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಪರಿಹಾರ ನೀಡುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಆಯೋಜಕರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮೀಣ ಪ್ರದೇಶಗಳಿಗೆ ಈ ಮಾದರಿಯನ್ನು ವಿಸ್ತರಿಸುವ ಉದ್ದೇಶವೂ ಇದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

9 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

10 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

10 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

16 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago