Advertisement
MIRROR FOCUS

ಡ್ರಗ್ಸ್ ‌ಪೂರೈಕೆ ಸರಪಳಿ ಕಿತ್ತುಹಾಕಲು ಕ್ರಮ : ಡ್ರಗ್ಸ್‌ ಕೂಡ ಭಾರತ ಪ್ರವೇಶಿಸಲು ಬಿಡಲ್ಲ – ಅಮಿತ್‌ ಶಾ

Share

ಶಾಲಾ ಕಾಲೇಜುಗಳ ಬಳಿ ಡ್ರಗ್ಸ್‌ (Drugs)ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದರು ಯಾರೂ ಏನು ಮಾಡದ ಪರಿಸ್ಥಿತಿ. ಇದಕ್ಕೆ ಸರ್ಕಾರವೇ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇದೀಗ ಒಂದು ಗ್ರಾಂ ಡ್ರಗ್ಸ್‌ ಕೂಡ ದೇಶಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

ವಿಜ್ಞಾನ ಭವನದಲ್ಲಿ ಗುರುವಾರ ನಡೆದ 7ನೇ ಅಪೆಕ್ಸ್ ಲೆವೆಲ್ ನಾರ್ಕೋ-ಕೋಆರ್ಡಿನೇಷನ್ ಸೆಂಟರ್ (ಎನ್‌ಸಿಒಆರ್‌ಡಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತವನ್ನು ಮಾದಕವಸ್ತುಗಳಿಂದ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು. ಡ್ರಗ್ಸ್ ‌ಪೂರೈಕೆ ಸರಪಳಿ ಕಿತ್ತುಹಾಕಲು ನಿರ್ದಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಕ ದ್ರವ್ಯ ವಿರೋಧಿ ಏಜೆನ್ಸಿಗಳಿಗೆ ಅಮಿತ್‌ ಶಾ ಸಲಹೆ ನೀಡಿದ್ದಾರೆ.

ಈಗ ಡ್ರಗ್ ಸಿಂಡಿಕೇಟ್‌ಗಳು ಸಮುದ್ರದ ಗಡಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ಈ ಡ್ರಗ್ಸ್ ಗಮ್ಯಸ್ಥಾನಗಳ ಬಗ್ಗೆ ಆಕಸ್ಮಿಕವಾಗಿ ನನಗೆ ಹೇಳುತ್ತಿದ್ದರು. ಎಲ್ಲಿಂದಲೇ ಆಗಲಿ ಒಂದೇ ಒಂದು ಗ್ರಾಂ ಡ್ರಗ್ಸ್ ಭಾರತಕ್ಕೆ ಬರಲು ಬಿಡುವುದಿಲ್ಲ ಎಂದು ನಾವು ನಿರ್ಣಯ ಮಾಡಬೇಕು. ಭಾರತದ ಗಡಿಗಳನ್ನು ಯಾವುದೇ ರೀತಿಯಲ್ಲಿ ಮಾದಕವಸ್ತು ವ್ಯಾಪಾರಕ್ಕೆ ಬಳಸಿಕೊಳ್ಳಲು ಅನುಮತಿಸಬಾರದು ಎಂದು ತಿಳಿಸಿದ್ದಾರೆ. ಯಾವುದೇ ಮಾದಕವಸ್ತುಗಳು ದೇಶಕ್ಕೆ ಪ್ರವೇಶಿಸದಂತೆ ತಡೆಯುವ ಬದ್ಧವಾಗಿರಿ. ಭಾರತದ ಗಡಿಗಳನ್ನು ಮಾದಕವಸ್ತು ಕಳ್ಳಸಾಗಣೆಗೆ ಬಳಸದಂತೆ ಖಾತ್ರಿಪಡಿಸಿ ಎಂದು ರಾಜ್ಯಗಳಿಗೆ ಮನವಿ ಮಾಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago