ಬೆಂಗಳೂರಿನಲ್ಲಿ ರೈತ ಮೋರ್ಚಾ ರಾಜ್ಯ ಮಟ್ಟದ ಕಾರ್ಯಾಗಾರ| ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ

August 30, 2024
2:54 PM

ರೈತ ಮೋರ್ಚಾವು(Raitha Morcha) ಬೂತ್ ಮಟ್ಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪೂರ್ಣ ಪ್ರಮಾಣದ ಶಕ್ತಿ ಸಿಗುವಂತಾಗಲು ಆರೋಗ್ಯಕರವಾದ ಚರ್ಚೆ ಮಾಡಬೇಕಿದೆ. ಕೇಂದ್ರದಿಂದ ರೈತಾಪಿ ಕುಟುಂಬದಿಂದ ಆಗುತ್ತಿರುವ ಅನುಕೂಲಗಳನ್ನು ರೈತ ಕುಟುಂಬಗಳಿಗೆ(Farmer) ತಿಳಿಸಬೇಕು ಎಂದು ಬಿಜೆಪಿ(BJP) ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು.

Advertisement
Advertisement
Advertisement
Advertisement

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಮಟ್ಟದ ಕಾರ್ಯಾಗಾರವನ್ನುದ್ದೇಶಿಸಿ, ಮಾತನಾಡಿದ ಅವರು . ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ ನೀಡಿದ್ದಾರೆ. 2014ರಲ್ಲಿ 74.88 ಲಕ್ಷ, ಕಳೆದ ಸಾರಿ ಅಂದರೆ 2019ರಲ್ಲಿ 26.86 ಲಕ್ಷ ಹೆಚ್ಚುವರಿ ಸದಸ್ಯತ್ವ ಸೇರಿ ಸುಮಾರು 1 ಕೋಟಿಯಷ್ಟು ಸದಸ್ಯತ್ವ ದಾಖಲಿಸಲಾಗಿತ್ತು ಎಂದು ತಿಳಿಸಿದರು.

Advertisement

ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಜಯಸೂರ್ಯನ್ ಅವರು ಕನಿಷ್ಠ 10 ಲಕ್ಷ ಸದಸ್ಯತ್ವವನ್ನು ಮೀರುವಂತೆ ಕೆಲಸ ಮಾಡಲು ತಿಳಿಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಲ್ಮರುಡಪ್ಪ, ಡಾ. ಬಿ.ಸಿ.ನವೀನ್‍ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಗುರುಲಿಂಗನಗೌಡ,  ಭಾರತಿ ಮಲ್ಲಿಕಾರ್ಜುನ, ಬ್ಯಾಟರಂಗೇಗೌಡ, ರಾಜ್ಯ ಕಾರ್ಯದರ್ಶಿಗಳಾದ ಆರ್. ರಾಜೇಶ್, ಸತೀಶ್ ಕಡತನಮಲೆ, ಅಶೋಕ್ ಕುಮಾರ್, ರೈತ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ | ಅನಿರೀಕ್ಷಿತ ಮಳೆಗೆ ಜನರು ತತ್ತರ | ಅಧಿಕಾರಿಗಳ ತಂಡದಿಂದ  ನಿರಂತರ ಪರಿಹಾರ ಕಾರ್ಯ | ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ| ಮಳೆ ಹಾನಿಗೆ ಶೀಘ್ರ ಪರಿಹಾರದ ಭರವಸೆ |
October 22, 2024
10:43 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ
October 22, 2024
12:34 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |
October 22, 2024
7:29 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |
October 22, 2024
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror