Advertisement
ಸುದ್ದಿಗಳು

ಬೆಂಗಳೂರಿನಲ್ಲಿ ರೈತ ಮೋರ್ಚಾ ರಾಜ್ಯ ಮಟ್ಟದ ಕಾರ್ಯಾಗಾರ| ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ

Share

ರೈತ ಮೋರ್ಚಾವು(Raitha Morcha) ಬೂತ್ ಮಟ್ಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪೂರ್ಣ ಪ್ರಮಾಣದ ಶಕ್ತಿ ಸಿಗುವಂತಾಗಲು ಆರೋಗ್ಯಕರವಾದ ಚರ್ಚೆ ಮಾಡಬೇಕಿದೆ. ಕೇಂದ್ರದಿಂದ ರೈತಾಪಿ ಕುಟುಂಬದಿಂದ ಆಗುತ್ತಿರುವ ಅನುಕೂಲಗಳನ್ನು ರೈತ ಕುಟುಂಬಗಳಿಗೆ(Farmer) ತಿಳಿಸಬೇಕು ಎಂದು ಬಿಜೆಪಿ(BJP) ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಮಟ್ಟದ ಕಾರ್ಯಾಗಾರವನ್ನುದ್ದೇಶಿಸಿ, ಮಾತನಾಡಿದ ಅವರು . ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ ನೀಡಿದ್ದಾರೆ. 2014ರಲ್ಲಿ 74.88 ಲಕ್ಷ, ಕಳೆದ ಸಾರಿ ಅಂದರೆ 2019ರಲ್ಲಿ 26.86 ಲಕ್ಷ ಹೆಚ್ಚುವರಿ ಸದಸ್ಯತ್ವ ಸೇರಿ ಸುಮಾರು 1 ಕೋಟಿಯಷ್ಟು ಸದಸ್ಯತ್ವ ದಾಖಲಿಸಲಾಗಿತ್ತು ಎಂದು ತಿಳಿಸಿದರು.

ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಜಯಸೂರ್ಯನ್ ಅವರು ಕನಿಷ್ಠ 10 ಲಕ್ಷ ಸದಸ್ಯತ್ವವನ್ನು ಮೀರುವಂತೆ ಕೆಲಸ ಮಾಡಲು ತಿಳಿಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಲ್ಮರುಡಪ್ಪ, ಡಾ. ಬಿ.ಸಿ.ನವೀನ್‍ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಗುರುಲಿಂಗನಗೌಡ,  ಭಾರತಿ ಮಲ್ಲಿಕಾರ್ಜುನ, ಬ್ಯಾಟರಂಗೇಗೌಡ, ರಾಜ್ಯ ಕಾರ್ಯದರ್ಶಿಗಳಾದ ಆರ್. ರಾಜೇಶ್, ಸತೀಶ್ ಕಡತನಮಲೆ, ಅಶೋಕ್ ಕುಮಾರ್, ರೈತ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

3 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

14 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

15 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago