ಬಹುಭಾಷಾ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

September 25, 2020
1:37 PM
ಇಲ್ಲವಾದ ಗಾನ ನಕ್ಷತ್ರ
ಕೊರೋನಾದಿಂದ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ

ಆ.5  ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಶುಕ್ರವಾರ ಮಧ್ಯಹ್ನದ ವೇಳೆ ಕೊನೆಯುಸಿರೆಳೆದರು.

ಎಸ್ ಪಿ ಬಾಲಸುಬ್ರಹ್ಮಣ್ಯಂ  ಅವರು 1946  ಜೂ.4 ರಂದು ಜನಿಸಿದ್ದರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಗಾಯನ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದರು.

ಕನ್ನಡದ ಟಿವಿ ವಾಹಿನಿಯಲ್ಲಿ ಎಸ್‌ ಪಿ ಬಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’   ಕಾರ್ಯಕ್ರಮ  ಬಹು ಜನಪ್ರಿಯವಾಗಿತ್ತು.

ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಸೇರಿದಂತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಒಟ್ಟು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರಿಗೆ ಲಭ್ಯವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror