ಆ.5 ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಶುಕ್ರವಾರ ಮಧ್ಯಹ್ನದ ವೇಳೆ ಕೊನೆಯುಸಿರೆಳೆದರು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 1946 ಜೂ.4 ರಂದು ಜನಿಸಿದ್ದರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಗಾಯನ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದರು.
ಕನ್ನಡದ ಟಿವಿ ವಾಹಿನಿಯಲ್ಲಿ ಎಸ್ ಪಿ ಬಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಬಹು ಜನಪ್ರಿಯವಾಗಿತ್ತು.
ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಸೇರಿದಂತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಒಟ್ಟು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರಿಗೆ ಲಭ್ಯವಾಗಿದೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…