ಆ.5 ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಶುಕ್ರವಾರ ಮಧ್ಯಹ್ನದ ವೇಳೆ ಕೊನೆಯುಸಿರೆಳೆದರು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 1946 ಜೂ.4 ರಂದು ಜನಿಸಿದ್ದರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಗಾಯನ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದರು.
ಕನ್ನಡದ ಟಿವಿ ವಾಹಿನಿಯಲ್ಲಿ ಎಸ್ ಪಿ ಬಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಬಹು ಜನಪ್ರಿಯವಾಗಿತ್ತು.
ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಸೇರಿದಂತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಒಟ್ಟು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರಿಗೆ ಲಭ್ಯವಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…