ಆ.5 ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಶುಕ್ರವಾರ ಮಧ್ಯಹ್ನದ ವೇಳೆ ಕೊನೆಯುಸಿರೆಳೆದರು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 1946 ಜೂ.4 ರಂದು ಜನಿಸಿದ್ದರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಗಾಯನ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದರು.
ಕನ್ನಡದ ಟಿವಿ ವಾಹಿನಿಯಲ್ಲಿ ಎಸ್ ಪಿ ಬಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಬಹು ಜನಪ್ರಿಯವಾಗಿತ್ತು.
ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಸೇರಿದಂತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಒಟ್ಟು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರಿಗೆ ಲಭ್ಯವಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…