Advertisement
ಸುದ್ದಿಗಳು

ನಮ್ಮ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸುಧಾರಿಸಲಿ | ಅಭಿಮಾನಿಗಳ ಪ್ರಾರ್ಥನೆ

Share

ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.  ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.

ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ  ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ  ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ ,  ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ  ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 minute ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

44 minutes ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

10 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

17 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

17 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago