Advertisement
ಸುದ್ದಿಗಳು

ನಮ್ಮ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸುಧಾರಿಸಲಿ | ಅಭಿಮಾನಿಗಳ ಪ್ರಾರ್ಥನೆ

Share

ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.  ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.

Advertisement
Advertisement

ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ  ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ  ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ ,  ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ  ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago