ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.
ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ , ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…