ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.
ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ , ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…