ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.
ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ , ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…