Advertisement
ಸುದ್ದಿಗಳು

ಅರಂತೋಡು-ತೊಡಿಕಾನ ಸಹಕಾರಿ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

Share

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.3ರಂದು ಭೇಟಿ ನೀಡಿದರು .

Advertisement
Advertisement

ಕುಶಾಲನಗರದಿಂದ ಹೊರಟು ಕಾರ್ಯಕ್ರಮ ನಿಮಿತ್ತ ಪುತ್ತೂರಿಗೆ ಬರುತ್ತಿದ್ದ ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ,ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಸಹಕಾರಿ ಸಂಘದ ವತಿಯಿಂದ ನಡೆಸಲಾಗುತ್ತಿರುವ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಯೂನಿಯನ್ ಸಂಘದ ಅಧ್ಯಕ್ಷ ರಮೇಶ್ ದೇಲಂಪಾಡಿಯವರ ನೇತೃತ್ವದ ತಂಡದಿಂದ ಸಾಲಮನ್ನಾ ಸೇರಿದಂತೆ ಇನ್ನಿತರ ಅಗತ್ಯ ಬೇಡಿಕೆಗಳ ಮನವಿಯನ್ನು ಸಚಿವರಲ್ಲಿ ಸಲ್ಲಿಸಿದರು. ವಸಂತ ಭಟ್ ತೊಡಿಕಾನ ಅವರು ತಾಳೆಬೆಳೆಗೆ ಉತ್ತೇಜನದ ಬಗ್ಗೆ ಮನವಿ ಸಲ್ಲಿಸಿದರು.

ಅಡಿಕೆ ಹಳದಿರೋಗ ಹಾಗೂ ಈ ಭಾಗದ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸುಳ್ಯ ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅವರು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿಷ್ಣು ಭಟ್, ಬಿಜೆಪಿ ನಾಯಕರಾದ ಹರೀಶ್ ರೈ ಉಬರಡ್ಕ, ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್, ಕುಸುಮಾಧರ, ಕೇಶವ, ವಿಜೇತ್ ಮರುವಳ, ಅರಂತೋಡು ಹಾಲು ಉತ್ಪದಕರ ಸಂಘದ ಉಪಾಧ್ಯಕ್ಷೆ ಭಾರತಿ ಉಳುವಾರು, ಬಿಜೆಪಿ ಮಹಿಳಾ ಮೋರ್ಚಾ ಸಮಿತಿ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ ಉಳುವಾರು,ಕಿಶೋರ್ ಕುಮಾರ್ ಉಳುವಾರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

18 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

18 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago