Advertisement
ಸುದ್ದಿಗಳು

ಅರಂತೋಡು-ತೊಡಿಕಾನ ಸಹಕಾರಿ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

Share

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.3ರಂದು ಭೇಟಿ ನೀಡಿದರು .

ಕುಶಾಲನಗರದಿಂದ ಹೊರಟು ಕಾರ್ಯಕ್ರಮ ನಿಮಿತ್ತ ಪುತ್ತೂರಿಗೆ ಬರುತ್ತಿದ್ದ ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ,ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಸಹಕಾರಿ ಸಂಘದ ವತಿಯಿಂದ ನಡೆಸಲಾಗುತ್ತಿರುವ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಯೂನಿಯನ್ ಸಂಘದ ಅಧ್ಯಕ್ಷ ರಮೇಶ್ ದೇಲಂಪಾಡಿಯವರ ನೇತೃತ್ವದ ತಂಡದಿಂದ ಸಾಲಮನ್ನಾ ಸೇರಿದಂತೆ ಇನ್ನಿತರ ಅಗತ್ಯ ಬೇಡಿಕೆಗಳ ಮನವಿಯನ್ನು ಸಚಿವರಲ್ಲಿ ಸಲ್ಲಿಸಿದರು. ವಸಂತ ಭಟ್ ತೊಡಿಕಾನ ಅವರು ತಾಳೆಬೆಳೆಗೆ ಉತ್ತೇಜನದ ಬಗ್ಗೆ ಮನವಿ ಸಲ್ಲಿಸಿದರು.

ಅಡಿಕೆ ಹಳದಿರೋಗ ಹಾಗೂ ಈ ಭಾಗದ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸುಳ್ಯ ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅವರು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿಷ್ಣು ಭಟ್, ಬಿಜೆಪಿ ನಾಯಕರಾದ ಹರೀಶ್ ರೈ ಉಬರಡ್ಕ, ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್, ಕುಸುಮಾಧರ, ಕೇಶವ, ವಿಜೇತ್ ಮರುವಳ, ಅರಂತೋಡು ಹಾಲು ಉತ್ಪದಕರ ಸಂಘದ ಉಪಾಧ್ಯಕ್ಷೆ ಭಾರತಿ ಉಳುವಾರು, ಬಿಜೆಪಿ ಮಹಿಳಾ ಮೋರ್ಚಾ ಸಮಿತಿ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ ಉಳುವಾರು,ಕಿಶೋರ್ ಕುಮಾರ್ ಉಳುವಾರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

3 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

4 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

13 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

17 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago